ಮರಾಠ ಪ್ರಾಧಿಕಾರ: ಕರ್ನಾಟಕ ಬಂದ್ ಎಚ್ಚರಿಕೆ

341

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ವ್ಯಾಮೋಹದಿಂದ, ಬಸವಕಲ್ಯಾಣದಲ್ಲಿ ಮಗನನ್ನ ಗೆಲ್ಲಿಸುವ ಸಲುವಾಗಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಅಸ್ತು ಅಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಜನತೆ ಸಿಎಂ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಕನ್ನಡಿಗರನ್ನ, ಕರ್ನಾಟಕವನ್ನ ಸದಾ ಕೀಳು ರೀತಿಯಲ್ಲಿ ಕಾಣುವ, ಗಡಿ ಭಾಗದಲ್ಲಿ ಸದಾ ಜಗಳ ಮಾಡಿಕೊಂಡು ಬೆಂಕಿ ಹಚ್ಚುವ ಕೆಲಸ ಮಾಡಿಕೊಂಡು ಬರ್ತಿರುವ ಮರಾಠ ಜನರನ್ನ ಮೆಚ್ಚಿಸಲು ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮುಂದಾಗಿರುವ ಬಿಎಸ್ವೈ ವಿರುದ್ಧ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ.

ರಾಜ್ಯ ಸರ್ಕಾರ ಕೂಡಲೇ ಮರಾಠ ಅಭಿವೃದ್ಧಿ ಪ್ರಾಧಿಕಾರದಿಂದ ಹಿಂದೆ ಸರಿದು ಆದೇಶ ವಾಪಸ್ ಪಡೆಯಬೇಕು. ಕನ್ನಡಿಗರಿಗೆ ಅನ್ಯಾಯ ಮಾಡ್ತಿರುವ ಬಿಎಸ್ವೈ ವಿರುದ್ಧ ಗುಡುಗಿರುವ ಅವರು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಮುಂದಾಗಿದ್ದಾರೆ. ಹೀಗಾಗಿ ಸಿಎಂ ಏನ್ ಮಾಡ್ತಾರೆ ಅನ್ನೋ ಪ್ರಶ್ನೆ ಮೂಡಿದೆ.




Leave a Reply

Your email address will not be published. Required fields are marked *

error: Content is protected !!