ಪ್ರಜಾಸ್ತ್ರ ಸುದ್ದಿ
ಮಸ್ಕಿ: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ವಿಧಾನಸಭೆ ಉಪ ಚುನಾವಣೆ ಸಂಬಂಧ, ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡ್ತಿರುವುದು ಕಂಡು ಬಂದಿದೆ. ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತರನ್ನ ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆನಂದ, ಸಚಿನ ಹಾಗೂ ನವೀನ ಅನ್ನೋ ಮೂವರನ್ನ ಬಂಧಿಸಲಾಗಿದೆ. ಇವರ ಬಳಿಯಿದ್ದ 81 ಸಾವಿರ ರೂಪಾಯಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ ಸ್ಪರ್ಧಿಸಿದ್ದಾರೆ.