ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚಿಕೆ: ಮೂವರು ಅರೆಸ್ಟ್

219

ಪ್ರಜಾಸ್ತ್ರ ಸುದ್ದಿ

ಮಸ್ಕಿ: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ವಿಧಾನಸಭೆ ಉಪ ಚುನಾವಣೆ ಸಂಬಂಧ, ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡ್ತಿರುವುದು ಕಂಡು ಬಂದಿದೆ. ಈ ಸಂಬಂಧ ಮೂವರನ್ನ ಬಂಧಿಸಲಾಗಿದೆ. ಬಿಜೆಪಿ ಕಾರ್ಯಕರ್ತರನ್ನ ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆನಂದ, ಸಚಿನ ಹಾಗೂ ನವೀನ ಅನ್ನೋ ಮೂವರನ್ನ ಬಂಧಿಸಲಾಗಿದೆ. ಇವರ ಬಳಿಯಿದ್ದ 81 ಸಾವಿರ ರೂಪಾಯಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ ಸ್ಪರ್ಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!