ಉಪ ಚುನಾವಣೆ: ಮಸ್ಕಿಗೆ ಸಿಎಂ ಭೇಟಿ

358

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಉಪಚುನಾವಣೆಯ ಕಣ ಬಿರುಸಿನಿಂದ ಕೂಡಿದೆ. ಕಾಂಗ್ರೆಸ್ ಅದಾಗ್ಲೇ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದೆ. ಜೆಡಿಎಸ್ ಬಸವಕಲ್ಯಾಣದ ಅಭ್ಯರ್ಥಿ ಘೋಷಿಸಿದೆ. ಈಗ ಉಳಿದಿರುವುದು ಬಿಜೆಪಿ ಮಾತ್ರ. ಈ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಯಡಿಯೂರಪ್ಪ ಶನಿವಾರ ಮಸ್ಕಿಗೆ ಭೇಟಿ ನೀಡುತ್ತಿದ್ದಾರೆ.

ಮಸ್ಕಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದ್ದು, ಇದರಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಇನ್ನು ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!