ಪ್ರಜಾಸ್ತ್ರ ಸುದ್ದಿ
ಮಸ್ಕಿ: ಉಪ ಚುನಾವಣೆಯ ಕರ್ತವ್ಯಕ್ಕೆ ತೆರಳಿದ್ದ ಶಿಕ್ಷಕ ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶಿಕ್ಷಕ ಕಟ್ಟೆಪ್ಪ(4) ಕೋವಿಡ್ ನಿಂದಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಾವನ್ನಪ್ಪಿದ್ದಾರೆ.
ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಪ್ರೌಢಶಾಲೆಯಲ್ಲಿ ವಿಜ್ಞಾನ ವಿಷಯ ಬೋಧನೆ ಮಾಡ್ತಿದ್ದ ಶಿಕ್ಷಕ, ಮಸ್ಕಿ ವಿಧಾನಸಭೆಯ ಉಪ ಚುನಾವಣೆಯ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ರು. ಇದಾದ ಬಳಿಕ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಿದ್ವು. ಪರೀಕ್ಷೆ ನಡೆಸಿದಾಗ ಕರೋನಾ ದೃಢಪಟ್ಟಿತ್ತು. ಇಂದು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು ಸೇರಿದಂತೆ ಇತರೆ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಎಷ್ಟು ಜನಕ್ಕೆ ಸೋಂಕು ತಗುಲಿದೆ ಅನ್ನೋ ಟೆನ್ಷನ್ ಶುರುವಾಗಿದೆ.