ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಜೆಡಿಎಸ್ ಅಭ್ಯರ್ಥಿ ವಿಶಾಲಾಕ್ಷಿ ಶಿವಾನಂದ ಪಾಟೀಲ ಅವರ ದೋರಣೆಯನ್ನು ಖಂಡಿಸಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷ ಸಂಘಟನೆ ಸೇರಿದಂತೆ ಮತಕ್ಷೇತ್ರದಲ್ಲಿ ಪದಾಧಿಕಾರಿಗಳ ಬೆಳವಣಿಗೆಗೆ ಅಸಹಕಾರ ತೋರುತ್ತಿದ್ದಾರೆ ಎಂದು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗರಾಜ ಬಗಲಿ, ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬಿರಾದಾರ, ತಾಲೂಕು ಅಧ್ಯಕ್ಷ ದಾನಪ್ಪಗೌಡ ಚನಗೊಂಡ, ಉಪಾಧ್ಯಕ್ಷ ಶಿವಶರಣ ಹೆಗ್ಗಣದೊಡ್ಡಿ, ತಾಲೂಕು ಕಾರ್ಯಾಧ್ಯಕ್ಷ ಮುದಿಗೌಡ ಬಿರಾದಾರ, ತಾಲೂಕು ಪ್ರಧಾನ ಕಾರ್ಯದರ್ಶಿ ಮಾಹಾಂತೇಶ ಓಂಕಾರ, ತಾಲೂಕು ಯುವ ಘಟಕದ ಅಧ್ಯಕ್ಷ ಸಂತೋಶ ಶಿರಕನಳ್ಳಿ, ಪ್ರಧಾನ ಕಾರ್ಯದರ್ಶಿ ಬಾಬುಪಟೇಲ ಬಿರಾದಾರ.
ಉದ್ಯಮ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ಬಾಸಗಿ, ಕಾರ್ಮಿಕ ಘಟಕದ ಅಧ್ಯಕ್ಷ ಎಸ್.ಬಿ ಪಾಟೀಲ, ವಕೀಲರ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನ ಕಂಬಾರ, ರೈತ ಘಟಕದ ಅಧ್ಯಕ್ಷ ದೇವಪಗೌಡ ಪಾಟೀಲ, ಸೇವಾಕಾಂಕ್ಷಿಗಳ ಘಟಕದ ಅಧ್ಯಕ್ಷ ಸಂಗಮೇಶ ತಾಳಿಕೋಟಿ, ತಾಲೂಕು ಯುವ ಘಟಕದ ಕಾರ್ಯದರ್ಶಿ ರಾಜು ಪಾಟೀಲ ಸೇರಿ 13 ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದ್ದಾರೆ.