ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ ಗಾಂಧಿ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯದ ಕಾರಣಕ್ಕೆ ಇದೀಗ ಅನೇಕ ಹಿರಿಯ ಹಾಗೂ ಕಿರಿಯ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಹುಲ ಗಾಂಧಿ ಪಕ್ಷವನ್ನ ಮುನ್ನೆಡಸಬೇಕು ಅಂತಾ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ.
ರಾಜೀನಾಮೆ ನೀಡಿದ ಲಿಸ್ಟ್ ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ಸಹ ಇದ್ದಾರೆ. ಮಧ್ಯಪ್ರದೇಶ ಘಟಕದ ಅಧ್ಯಕ್ಷರಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ ಬಬಾರಿಯಾ ಹಾಗೂ ಗೋವಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಿರೀಶ ಚೊಡನಕರ್ ರಾಜೀನಾಮೆ ನೀಡಿದ್ದಾರೆ.
ಎಐಸಿಸಿ ಪ್ರಾಧಾನ ಕಚೇರಿಗೆ ಶುಕ್ರವಾರ ಭೇಟಿ ನೀಡಿದ 300ಕ್ಕೂ ಹೆಚ್ಚು ಕಿರಿಯ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯ ಸೋಲಿನಲ್ಲಿ ನಮ್ಮ ಪಾತ್ರವೂ ಇದೆ. ಹೀಗಾಗಿ ಸೋಲಿನ ಹೊಣೆಯನ್ನ ನಾವು ಸಹ ಹೊತ್ತು ರಾಜೀನಾಮೆ ನೀಡುತ್ತೇವೆ ಅಂತಾ ತಿಳಿಸಿದ್ದಾರೆ.