ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಪ್ರಾಣವೇ ಹೋಯ್ತು!

239

ಪ್ರಜಾಸ್ತ್ರ ಅಪರಾಧ ಸುದ್ದಿ

ಹಾಸನ: ಯುವತಿಗೆ ಮೆಸೇಜ್ ಮಾಡುತ್ತಿದ್ದ ಅನ್ನೋ ಕಾರಣಕ್ಕೆ ಯುವಕನೊಬ್ಬ ಪ್ರಾಣ ಕಳೆದುಕೊಂಡ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರೀನಿವಾಸಪುರ ಹತ್ತಿರ ನಡೆದಿದೆ. ಟೈಲರಿಂಗ್ ಕೆಲಸ ಮಾಡುತ್ತಿದ್ದ ಗಂಗಾಧರ ಮೃತಪಟ್ಟ ಯುವಕ.

ಕೊಲೆಯಾದ ಗಂಗಾಧರ ಮದುವೆಯಾಗಿದ್ದ ಯುವತಿಗೆ ಮೆಸೇಜ್ ಮಾಡುತ್ತಿದ್ದ ಅನ್ನೋ ಕಾರಣಕ್ಕೆ ಯುವಕರ ಗುಂಪೊಂದು ಅಪಹರಿಸಿ ದೊಣ್ಣೆಯಿಂದ ಗಂಭೀರವಾಗಿ ಹಲ್ಲೆ ಮಾಡಿ ಪರಾರಿಯಾಗಿದೆ. ತೀವ್ರ ಗಾಯಗೊಂಡಿದ್ದ ಗಂಗಾಧರ ಅಣ್ಣ ಮೋಹನಿಗೆ ಕಾಲ್ ಮಾಡಿ ಹೇಳಿದ್ದಾನೆ.

ಸಹೋದರನನ್ನು ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಚಿಕಿತ್ಸೆ ಫಲಿಸದೆ ಗಂಗಾಧರ ಮೃತಪಟ್ಟಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!