ಒಡಿಶಾದಲ್ಲಿ ಬೆಂಕಿ ಅನಾಹುತ, 200ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

253

ಪ್ರಜಾಸ್ತ್ರ ಸುದ್ದಿ

ಒಡಿಶಾ: ಇಲ್ಲಿನ ಕೆಂಧುಝರ್ ಪಟ್ಟಣದ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಅನಾಹುತದಿಂದಾಗಿ ಬರೋಬ್ಬರಿ 200ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಈ ಅನಾಹುತದಿಂದ ಸುಮಾರು 50 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಇನ್ನು ಬೆಂಕಿ ನಂದಿಸಲು ಅಗ್ಮಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಡಬೇಕಾಯಿತು. 6 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ.

ಘಟನೆಯಲ್ಲಿ ಸಾವು, ನೋವು ಸಂಭವಿಸಿದರ ಬಗ್ಗೆ ಇನ್ನು ಯಾವುದೇ ಮಾಹಿತಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಸಬ್ ಕಲೆಕ್ಟರ್ ರಾಮಚಂದ್ರ ಕಿಸ್ಕು ಪ್ರತಿಕ್ರಿಯಿಸಿದ್ದಾರೆ. ವ್ಯಾಪಾರ ನಂಬಿ ಬದುಕು ಕಟ್ಟಿಕೊಂಡವರು ಕಂಗಾಲಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!