ಪ್ರಜಾಸ್ತ್ರ ಸುದ್ದಿ
ಕೊಯಮತ್ತೂರು: ಕಳೆದ ಮಾರ್ಚ್ 24ರಂದು ತಮ್ಮ ಮನೆಯಲ್ಲಿ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಂಡಿಎಂಕೆ ಪಕ್ಷದ ಸಂಸದ ಗಣೇಶಮೂರ್ತಿ(76) ಗುರುವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಿಷಯುಕ್ತ ಮಾತ್ರೆ ಸೇವಿಸಿದ ವಿಷಯ ತಿಳಿದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಈರೋಡ್ ಟೌನ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದರು ಅನ್ನೋದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
1998ರಲ್ಲಿ ಪಳನಿ, 2009ರಲ್ಲಿ ಈರೋಡ್ ನಲ್ಲಿ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. 2019ರಲ್ಲಿ ಡಿಎಂಕೆ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆಲುವು ದಾಖಲಿಸಿದ್ದರು.