ಮಂಗಳೂರು: ಮುಜರಾಯಿ ಇಲಾಖೆ ಸಚಿವ ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ನಿರ್ಗತಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಎ ದರ್ಜೆಯ ದೇವಸ್ಥಾನಗಳಿಂದ ಊಟ, ಉಪಹಾರ ನೀಡಲು ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದು, ಪ್ರದೇಶಿಕವಾಗಿ ಸಂದರ್ಭಕ್ಕೆ ತಕ್ಕಂತೆ ಊಟ, ಉಪಹಾರವನ್ನ ಪ್ಯಾಕೇಟ್ ಮೂಲಕ ವಿತರಣೆ ಮಾಡಲು ತಿಳಿಸಿದ್ದಾರೆ. ಎಲ್ಲೆಲ್ಲಿ ಹಸಿವಿನಿಂದ ನಿರ್ಗತಿಕರು, ಕೂಲಿ ಕಾರ್ಮಿಕರು ಬಳಲುತ್ತಿದ್ದಾರೋ ಅವರಿಗೆ ಸ್ಥಳೀಯ ಜಿಲ್ಲಾಡಳಿತ ನಿರ್ಧರಿಸಿದಂತೆ ಆಹಾರ ವಿತರಿಸಲು ಸೂಚನೆ ನೀಡಿದ್ದಾರೆ.