ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಮೆಗಾ ಟೆಕ್ಸ್ ಟೈಲ್ ಪಾರ್ಕ್ ನಿರ್ಮಾಣಕ್ಕಾಗಿ ವಿಜಯಪುರ ಹಾಗೂ ಕಲಬುರಗಿಯಲ್ಲಿ ಒಂದು ಸಾವಿರ ಎಕರೆ ಭೂಮಿ ಗುರುತಿಸಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಮಂಜೂರಾಗುವ ಭರವಸೆ ಇದೆ ಎಂದು ಕೈಮಗ್ಗ ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಲಾರ ಹಾಗೂ ಧಾರವಾಡದವರು ಟೆಕ್ಸ್ ಟೈಲ್ ಪಾರ್ಕಿಗೆ ಮನವಿ ಮಾಡಿದ್ದಾರೆ. ಅಲ್ಲಿಯೂ ಜಾಗ ಗುರುತಿಸುವ ಕೆಲಸ ನಡೆದಿದೆ ಎಂದರು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಸಿಗುವಂತೆ ನೇಕಾರರ ಕುಟುಂಬಕ್ಕೂ ಸಿಗಬೇಕು. ಬಜೆಟ್ ನಲ್ಲಿ ಈ ಬಗ್ಗೆ ಸೇರಿಸುವಂತೆ ಸಿಎಂಗೆ ಮನವಿ ಮಾಡಲಾಗಿದೆ ಅಂತಾ ತಿಳಿಸಿದರು.