ನಾನು ಜೀವಂತವಾಗಿ ವಾಪಸ್ ಬಂದಿದ್ದೇನೆ: ಪ್ರಧಾನಿ ಮೋದಿ

268

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪಂಜಾಬ್ ನ ಫಿರೋಜ್ ಫುರ್ ನಲ್ಲಿ ವಿವಿಧ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ, ಬಟಿಂಡ್ ಹತ್ತಿರದ ಫ್ಲೈ ಓವರ್ ಬಳಿ ಜಮಾಯಿಸಿದ ಪ್ರತಿಭಟನಾಕಾರರಿಂದ ಫಿರೋಜ್ ಪುರಕ್ಕೆ ಹೋಗಲು ಆಗದೆ ವಾಪಸ್ ಆಗಿದ್ದಾರೆ.

ಈ ಘಟನೆಯಿಂದ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಭದ್ರತಾ ಅಧಿಕಾರಿಗಳ ಎದುರು, ನಾನು ಜೀವಂತವಾಗಿ ವಿಮಾನ ನಿಲ್ದಾಣ ತಲುಪಿದ್ದೇನೆ. ನಿಮ್ಮ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿ ಎಂದು ಪರೋಕ್ಷವಾಗಿ ಸಿಟ್ಟನ್ನು ಹೊರ ಹಾಕಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಂಜಾಬ್ ಮುಖ್ಯಮಂತ್ರಿಗೆ ಫೋನ್ ಮಾಡಿದರೆ ಫೋನ್ ತೆಗೆಯುತ್ತಿಲ್ಲವೆಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!