ಪ್ರಜಾಸ್ತ್ರ ಸುದ್ದಿ
ಮೈಸೂರು: ಮೇಕೆದಾರು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು 3ನೇ ದಿನ. ಮೈಸೂರಿನಿಂದ ಇಂದಿನ ಪಾದಯಾತ್ರೆ ಶುರುವಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಟಿ.ಪುಟ್ಟಣ್ಣ ಇಲ್ಲನ ಗಾಂಧಿ ಸರ್ಕಲ್ ಬಳಿ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ಶಾಸಕ ಮಂಜುನಾಥ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು. ಮೈಸೂರಿನಿಂದ 8 ಸಾವಿರ ಜನ ಭಾಗವಹಿಸುತ್ತಿದ್ದಾರೆ ಎಂದು ಬಿ.ಜೆ ವಿಜಯಕುಮಾರ್ ತಿಳಿಸಿದ್ದಾರೆ.