ತಿಹಾರ್ ಜೈಲ್ ನೋಡಿದೀನಿ.. ರಾಮನಗರ ಜೈಲೂ ನೋಡೋಣ: ಡಿಕೆಶಿ

535

ಪ್ರಜಾಸ್ತ್ರ ಸುದ್ದಿ

ರಾಮನಗರ: ಮೇಕೆದಾಟು ಯೋಜನೆ ಸಂಬಂಧ ಕಾಂಗ್ರೆಸ್ ಭಾನುವಾರದಿಂದ ಕನಕಪುರದ ಸಂಗಮದಿಂದ ಬೆಂಗಳೂರುವರೆಗೂ ಪಾದಯಾತ್ರೆ ಹಮ್ಮಿಕೊಂಡಿದೆ. ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಊರಾದ ದೊಡ್ಡಾಲಹಳ್ಳಿಯಲ್ಲಿ ಉಳಿದುಕೊಂಡಿದ್ದರು. ಇಲ್ಲಿಗೆ ಇಂದು ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೇಳಿಕೊಂಡಿತು.

ಅಧಿಕಾರಿಗಳೊಂದಿಗೆ ಮಾತನಾಡಿದ ಡಿಕೆಶಿ, ನನಗೆ ಯಾವ ರೋಗ ಲಕ್ಷಣಗಳು ಇಲ್ಲ. ನಾನು ಟೆಸ್ಟ್ ಮಾಡಿಸಿಕೊಳ್ಳುವುದಿಲ್ಲವೆಂದು ವಾಪಸ್ ಕಳುಹಿಸಿದ್ದಾರೆ. ಅಲ್ದೇ, ಈ ರೀತಿಯ ನಡವಳಿಕೆಯನ್ನು ಮುಖ್ಯಮಂತ್ರಿಗಳಿಂದ ನರೀಕ್ಷೆ ಮಾಡಿರಲಿಲ್ಲ. ಹೋಗಾಗಿ ಆರೋಗ್ಯ ಸಚಿವರಿಗೆ ಹೇಳಿ, ಈ ರೀತಿ ಆಟಗಳನ್ನು ಯಾರಾದರೂ ಬಚ್ಚಗಳತ್ರ ಆಡಲಿ. ವಿಮಾನ ನಿಲ್ದಾಣದಲ್ಲಿ ಬೇರೆ ಕಡೆಯಿಂದ ಬಂದ ಪ್ರಯಾಣಿಕರನ್ನು ಟೆಸ್ಟ್ ಮಾಡಿಸಿ ಎಂದು ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!