ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 19 ಸಾಂಕ್ರಾಮಿಕ ರೋಗದ ಭೀತಿಯ ಹೊತ್ತಲ್ಲಿ ಕಾಂಗ್ರೆಸ್ ಹೊರಟಿದ್ದ ಪಾದಯಾತ್ರೆ 5ನೇ ದಿನಕ್ಕೆ ಮೊಟಕುಗೊಂಡಿದೆ. ಪಿಐಎಲ್ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹೈಕೋರ್ಟ್ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಚಾಟಿ ಏಟು ಬೀಸಿತ್ತು.
ಕಾಂಗ್ರೆಸ್ ಹಾಗೂ ಸರ್ಕಾರ ಈ ಬಗ್ಗೆ ಹೈಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ. ಇನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನಾಯಕರಲ್ಲಿ ಪಾದಯಾತ್ರೆ ನಿಲ್ಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಇನ್ನು ಕೋರ್ಟ್ ಆದೇಶಕ್ಕೆ ತಲೆ ಬಾಗಿ ಪಾದಯಾತ್ರೆಯಿಂದ ಹಿಂದೆ ಸರಿಯುತ್ತಿದ್ದೇವೆ. ಇದು ಜನರಿಗಾಗಿ ನಡೆದ ಪಾದಯಾತ್ರೆ. ಹೀಗಾಗಿ ಇದಕ್ಕೆ ಜನರೇ ಬರುತ್ತಿದ್ದಾರೆ. ಎಲ್ಲಿ ಪಾದಯಾತ್ರೆ ನಿಂತಿದೆಯೋ ಮುಂದೆ ಅಲ್ಲಿಂದಲೇ ಶುರು ಮಾಡಲಾಗುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.