ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ಮೊಟಕುಗೊಳಿಸಲು ಬಿಜೆಪಿ ಸರ್ಕಾರ ಷಡ್ಯಂತ್ರ ರೂಪಿಸುತ್ತಿದೆ. ಈ ಮೂಲಕ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಡಿಕೆಶಿ, ರಾಜ್ಯ ಸರ್ಕಾರ ಕೋವಿಡ್ ಸಂಖ್ಯೆ ಹೆಚ್ಚಳ ಮಾಡಿ ನಿರ್ಬಂಧ ಹೇರುತ್ತಿದೆ. ಕುಡಿಯುವ ನೀರಿಗಾಗಿ ನಮ್ಮ ಪಾದಯಾತ್ರೆಗೆ ವ್ಯಕ್ತವಾಗುತ್ತಿರುವ ಬೆಂಬಲ ಸಹಿಸಲಾಗಿದೆ ಸಂಚು ರೂಪಿಸುತ್ತಿದ್ದು, ನನ್ನ ಪ್ರಾಣ ಹೋದರೂ ಪಾದಯಾತ್ರೆ ನಿಲ್ಲಿಸಲ್ಲ ಎಂದು ಆಕ್ರೋಶ ಹೊರ ಹಾಕಿದರು.