ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಜಾರಿಗೆ ತರಬೇಕೆಂದು ಈಗಾಗ್ಲೇ ಕಾಂಗ್ರೆಸ್ ಪಾದಯಾತ್ರೆಯನ್ನು ನಡೆಸಿದೆ. ಈ ಯೋಜನೆಗೆ ರಾಜ್ಯ ಸರ್ಕಾರ 1000 ಕೋಟಿ ಅನುದಾನ ಘೋಷಿಸಿದೆ. ಈ ಯೋಜನೆಯ ಬೆಂಬಲಕ್ಕೆ ದಿ ವಾಟರ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪರಿಸರವಾದಿ ರಾಜೇಂದ್ರ ಸಿಂಗ್ ಬಂದಿದ್ದಾರೆ.
ಈ ಸಂಬಂಧ ಕರ್ನಾಟಕ ನೆಲಜಲ ಪರಿಸರ ರಕ್ಷಣಾ ಸಮಿತಿ ವತಿಯಿಂದ ಮಾರ್ಚ್ 9, ಬುಧವಾರ ಮುಂಜಾನೆ 10.30ಕ್ಕೆ ನಗರದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಗುತ್ತಿದೆ. ಮೇಕೆದಾಟು ಯೋಜನೆ ಬೆಂಬಲಿಸಿ, ಆಣೆಕಟ್ಟು ವಿರೋಧಿಸಿ ಮಾಧ್ಯಮಗೋಷ್ಠಿ ನಡೆಸಲಿದ್ದಾರೆ. ಇದರಲ್ಲಿ ರಾಜೇಂದ್ರ ಸಿಂಗ್ ಹಾಗೂ ನಟ ಮತ್ತು ಹೋರಾಟಗಾರ ಚೇತನ್ ಅಹಿಂಸಾ ಭಾಗವಹಿಸುತ್ತಿದ್ದಾರೆ.