ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಜನವರಿ 9ರಂದು ಪಾದಯಾತ್ರೆ ನಡೆಸಲು ಸಜ್ಜಾಗಿದೆ. ಆದರೆ, ಓಮಿಕ್ರಾನ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದೆ, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಸರ್ಕಾರ ಹೇಳಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಲು ಬರುವ ಮುಖಂಡರು, ಕಾರ್ಯಕರ್ತರಿಗಾಗಿ ರಾಮನಗರ, ಕನಕಪುರದಲ್ಲಿನ ಹೋಟೆಲ್, ಲಾಡ್ಜ್, ರೆಸಾರ್ಟ್ ಗಳಲ್ಲಿ ರೂಮ್ ಬುಕ್ ಮಾಡಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಇಂದು ರಾತ್ರಿಯಿಂದ ಸೋಮವಾರದ ತನಕ ಇರುವುದರಿಂದ ಇವುಗಳನ್ನೆಲ್ಲ ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದರೆ, ನಾವು ಪಾದಯಾತ್ರೆ ನಿಲ್ಲಿಸಲು ಎಂದಿದ್ದಾರೆ ಡಿಕೆಶಿ, ಸಿದ್ದರಾಮಯ್ಯ.
ನಾವು ಎಲ್ಲಿ ಇರುತ್ತೇವೆಯೋ ಅಲ್ಲಿಯೇ ಮಲಗುತ್ತೇವೆ. ರಾಜ್ಯದ ಜನರ ಹಿತಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ. ನಾನು, ಸಿದ್ದರಾಮಯ್ಯ ಇಬ್ಬರೆಯಾದರೂ ಸರಿ ಪಾದಯಾತ್ರೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.