ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಕೈಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಅರ್ಧಕ್ಕೆ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಶುರು ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಫೆಬ್ರವರಿ 27ರಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ರಾಮನಗರದಲ್ಲಿ ನಿಲ್ಲಿಸಲಾಗಿದ್ದ ಪಾದಯಾತ್ರೆಯನ್ನು ಅಲ್ಲಿಂದಲೇ ಶುರು ಮಾಡುತ್ತೇವೆ. ಈ ವೇಳೆ ಎಲ್ಲರಿಗೂ ಆಹ್ವನಿಸಿದ್ದೇವೆ. ಹೆಜ್ಜೆ ಹಾಕುತ್ತೇವೆ. ಹೆಜ್ಜೆ ಹಾಕುತ್ತೇವೆ. ನೀರಿಗಾಗಿ ಹೆಜ್ಜೆ ಹಾಕುತ್ತೇವೆ ಎಂದರು.