ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇಕೆದಾಟು ವಿಚಾರ ಸಂಬಂಧ ಸಾಕಷ್ಟು ರಾಜಕೀಯ ಬೆಳವಣಿಗೆಗಳು ಸಹ ನಡೆಯುತ್ತಿವೆ. ಈ ಯೋಜನೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಈ ಯೋಜನೆ ಮಾಡಬೇಕು ಎಂದು ಪ್ರಧಾನಿ ಮೋದಿ ಅವರನ್ನ ಭೇಟಿಯಾಗುತ್ತೇವೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟಿನಲ್ಲಿ ಆಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು? ಯಾರು ಯಾರ ಪರ ಇದ್ದೀರಿ ಎಂದು ಕೇಳಿದ್ದಾರೆ.