ಮೇಕೆದಾಟು ಯೋಜನೆ ತಮಿಳುನಾಡು ಜೊತೆ ರಾಜಿಯಿಲ್ಲ: ಸಿಎಂ ಬೊಮ್ಮಾಯಿ

295

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಹತ್ವದ ಮೇಕೆದಾಟು ಯೋಜನೆ ವಿಚಾರ ಇದೀಗ ಕರ್ನಾಟಕ ಹಾಗೂ ತಮಿಳುನಾಡು ರಾಜಕೀಯ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಈ ಯೋಜನೆ ಜಾರಿಯಾಗದಂತೆ ನಾವು ತಡೆಯುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಇದಕ್ಕೆ ಉತ್ತರ ನೀಡಿರುವ ಕರ್ನಾಟಕ ಸಿಎಂ ಬೊಮ್ಮಾಯಿ, ಮೇಕೆದಾಟು ಯೋಜನೆ ಮಾಡಿಯೇ ಸಿದ್ಧ. ಈ ವಿಚಾರದಲ್ಲಿ ರಾಜಿ ಸಂಧಾನವಿಲ್ಲ. ನಾವು ಸ್ಪಷ್ಟವಾಗಿದ್ದೇವೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಈ ಯೋಜನೆಯಿಂದ ನೀರು ಸಿಗಲಿದೆ. ರಾಜ್ಯ ಸರ್ಕಾರ ಈಗಾಗ್ಲೇ ಈ ಬಗ್ಗೆ ವಿಸ್ತೃತ ವರದಿ ಸಿದ್ಧಪಡಿಸಿದೆ. ಕೇಂದ್ರದಿಂದ ನಮಗೆ ಸಂಪೂರ್ಣ ಸಹಕಾರ ಸಿಗಲಿದೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!