ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮೇಕೆದಾಟು ಯೋಜನೆಯ ಅಣೆಕಟ್ಟನ್ನು ಕರ್ನಾಟಕ ಸರ್ಕಾರ ನಿರ್ಮಾಣ ಮಾಡುವ ಸಂಬಂಧ ತಮಿಳುನಾಡು ಸರ್ಕಾರ ವಿರೋಧಿಸುತ್ತಲೇ ಬಂದಿದೆ. ಇದೀಗ ಇದರ ತುರ್ತು ವಿಚಾರಣೆಗೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿತ್ತು.
ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 26ಕ್ಕೆ ಮುಂದೂಡಿಕೆ ಮಾಡಿದೆ. ತಮಿಳುನಾಡು ಸರ್ಕಾರ ಕಳೆದ ವಾರ ತುರ್ತು ವಿಚಾರಣೆಗೆ ಅರ್ಜಿ ಸಲ್ಲಿಕೆ ಮಾಡಿತ್ತು.