ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿದ್ದ ಪುಂಡರು, ಬೆಳಗಾವಿಯಲ್ಲಿ ಮಧ್ಯರಾತ್ರಿ ಗಲಾಟೆ ನಡೆಸಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಘಟನೆ ಸಂಬಂಧ 27 ಜರನ್ನು ಬಂಧಿಸಲಾಗಿದೆ.
ರಾತ್ರೋರಾತ್ರಿ ಗಲಾಟೆ ಮಾಡಿದ ನಯವಂಚಕರನ್ನು ಬಂಧಿಸಲಾಗುತ್ತಿದೆ. ಇದೀಗ 27 ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಅಲ್ದೇ, ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದಿನಿಂದ ಭಾನುವಾರ ರಾತ್ರಿ 8ಗಂಟೆಯ ತನಕ 144 ಸೆಕ್ಷನ್ ಜಾರಿ ಮಾಡಲಾಗಿದೆ.