ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ವಿಚಾರ ಹಾಗೂ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವ ಘಟನೆ ಸಂಬಂಧ ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ರೊಚ್ಚಿಗೆದಿದ್ದಾರೆ. ರಾಜ್ಯದ ತುಂಬಾ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಳಗಾವಿಯ ನಿಪ್ಪಾಣಿಯಲ್ಲಿ ಬಂದ್ ಮಾಡಿ ಶಾಂತಿಯುತ ಪ್ರತಿಭಟನೆ ನಡೆಸಲಾಗುತ್ತಿದೆ.
ಸುಮಾರು 500ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಎಂಇಸಿ ನಿಷೇಧ ಸಂಬಂಧ ಬುಧವಾರ ಕರ್ನಾಟಕ ಬಂದ್ ಮಾಡುವ ಚಿಂತನೆ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಈ ಬಗ್ಗೆ ವಾಠಾಳ್ ನಾಗರಾಜ್ ಜೊತೆಗೆ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಹಿರೇಬಾಗೇವಾಡಿ ಹತ್ತಿರ ಹೇಳಿದ್ದಾರೆ.