ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಸ್ವಪಕ್ಷೀಯ ಸದಸ್ಯೆಯನ್ನ ಎಳೆದಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿದ್ದು ಸವದಿ ಸ್ಪಷ್ಟನೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಗೌರವ ಇದೆ. ನಾನು ಹಿಡಿದು ಎಳೆದಾಡಿ ಅಸಭ್ಯವಾಗಿ ವರ್ತಿಸಿಲ್ಲವೆಂದು ಹೇಳಿದ್ದಾರೆ.
ಬಿಜೆಪಿಗೆ ಬಹುಮತ ಇದೆ. ಆದ್ರೆ, ಕಾಂಗ್ರೆಸನವರು ನಮ್ಮವರಿಗೆ ಆಮಿಷವೊಡ್ಡಿ ಕಿಡ್ನಾಪ್ ಮಾಡುವ ನೀಚ ರಾಜಕಾರಣ ಮಾಡಿದ್ರು. ಹಕ್ಕು ಮಂಡನೆಗೆ ಅವಕಾಶ ನೀಡಿಲ್ಲವೆಂದು ಮಾಜಿ ಸಚಿವೆ ಉಮಾಶ್ರೀ ಹೇಳಿದ ಮಾತು ಶುದ್ಧ ಸುಳ್ಳು ಎಂದು ಶಾಸಕ ಸವದಿ ಹೇಳಿದ್ದಾರೆ.
ಕಾಂಗ್ರೆಸ್ ವಾಮಮಾರ್ಗದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಪಡೆಯಲು ಮುಂದಾಗಿತ್ತು. ರಾತ್ರೋರಾತ್ರಿ ಬಿಜೆಪಿ ಸದಸ್ಯರನ್ನ ಕಿಡ್ನಾಪ್ ಸಹ ಮಾಡಿತ್ತು ಎಂದು ಆರೋಪ ಮಾಡಿದ್ರು.