ಚೆನ್ನೈನಲ್ಲಿ ನಿಲ್ಲದ ಚಂಡಮಾರುತದ ಅಬ್ಬರ

188

ಪ್ರಜಾಸ್ತ್ರ ಸುದ್ದಿ

ಚೆನ್ನೈ: ಮಿಚಾಂಗ್ ಚಂಡಮಾರುತದ ಆರ್ಭಟ ತಮಿಳುನಾಡಿನಲ್ಲಿ ಜೋರಾಗಿದೆ. ಅದರಲ್ಲೂ ರಾಜಧಾನಿ ಚೆನ್ನೈನ ಮೇಲೆ ಇದರ ಪರಿಣಾಮ ಭಾರೀ ಆಗಿದೆ. ಭರ್ಜರಿ ಮಳೆ, ಗಾಳಿಯಿಂದ ಇದುವರೆಗೂ 8 ಜನರು ಮೃತಪಟ್ಟಿದ್ದಾರೆ.

ಚೆನ್ನೈ, ಕಾಂಚೀಪುರಂ, ತಿರುವೆಲ್ಲೂರು, ಚೆಂಗಲಪಟ್ಟು ಜಿಲ್ಲೆಗಳಲ್ಲಿ ಮಂಗಳವಾರ ರಜೆ ಘೋಷಿಸಲಾಗಿದೆ. ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಚೆನ್ನೈ ವಿಮಾನ ನಿಲ್ದಾಣದ ರನ್ ವೇ ಜಲಾವೃತಗೊಂಡ ಪರಿಣಾಮ 70 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು.

ಬಸ್, ರೈಲು ಸಂಚಾರದಲ್ಲಿ ಸಮಸ್ಯೆ ಉಂಟಾಗಿದೆ. ಕೊಯಮತ್ತೂರು-ಮೈಸೂರು ರೈಲು ಸಂಚಾರ ರದ್ದಾಗಿದೆ. ರಕ್ಷಣಾ ಕಾರ್ಯಾಚರಣೆ, ಪರಿಹಾರಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸ್ಟಾಲಿನ್ ಸಭೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!