ಅಯೋಧ್ಯೆಗೆ ಹೊರಟಿದ್ದ ರಾಜ್ಯದ 7 ಪ್ರಯಾಣಿಕರ ಸಾವು

448

ಪ್ರಜಾಸ್ತ್ರ ಸುದ್ದಿ

ಲಖ್ನೋ: ಉತ್ತರ ಪ್ರದೇಶದ ಬಹರಿಚ್-ಲಖೀಂಪುರ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕದ 7 ಜನರು ಮೃತಪಟ್ಟಿದ್ದಾರೆ. ಟೂರಿಸ್ಟ್ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಈ ದುರಂತ ನಡೆದಿದೆ.

ಕರ್ನಾಟಕದಿಂದ ಅಯೋಧ್ಯೆಗೆ 16 ಮಂದಿ ಟೂರಿಸ್ಟ್ ಬಸ್ ನಲ್ಲಿ ಪ್ರಯಾಣ ಬೆಳೆಸಿದ್ದರು. ಇಂದು ಮುಂಜಾನೆ ನನಿಹಾ ಮಾರುಕಟ್ಟೆ ಹತ್ತಿರ ಟ್ರಕ್ ಬಂದು ಡಿಕ್ಕಿ ಹೊಡೆದಿದೆ. ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 2 ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಹಿಳೆಯರಿದ್ದಾರೆ.

ಇತರೆ 9 ಮಂದಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಆತನ ಹುಡುಕಾಟವನ್ನು ಪೊಲೀಸರು ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!