ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಸೀಟ್ ಖಾಲಿ ಇಲ್ಲ. ಖಾಲಿ ಇದ್ರೆ ಟವೆಲ್ ಹಾಕಬಹುದು. ಸೀಟ್ ಖಾಲಿ ಇಲ್ಲದ್ಮೇಲೆ ಟವೆಲ್ ಎಲ್ಲಿ ಹಾಕ್ತೀರಿ ಎಂದು ಕಂದಾಯ ಸಚಿವ ಆರ್.ಅಶೋಕ, ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆ ಜಯಸಿದ್ದೇವೆ. ಖಾಲಿ ಇಲ್ಲದ ಸೀಟ್ ಮೇಲೆ ಟವೆಲ್ ಹಾಕುವ ಪ್ರಯತ್ನ ಎಲ್ಲರೂ ನಿಲ್ಲಿಸಲು. ಯಡಿಯೂರಪ್ಪ ನಡೆಯನ್ನ ಹೈಕಮಾಂಡ್ ಸಹಿಸಿಕೊಳ್ಳುತ್ತಿಲ್ಲ ಎನ್ನುವುದು ಶುದ್ಧ ಸುಳ್ಳು. ಸ್ವಾರ್ಥಕ್ಕಾಗಿ ಯತ್ನಾಳ ಹೇಳಿಕೆ ನೀಡ್ತಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದ ಶಾಸಕರ ಹೇಳಿಕೆ ಅಲ್ಲ. ಮುಖ್ಯಮಂತ್ರಿ ಆಗಲು ಹಗಲು ಕನಸು ಕಾಣ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಮಾತಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತ್ಯುತ್ತರ ಕೊಡ್ತಾರಾ? ಅಥವ ಸೈಲೆಂಟ್ ಆಗ್ತಾರಾ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ.