ಪ್ರಜಾಸ್ತ್ರ ಸುದ್ದಿ
ಮಂಡ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಕೆಸರೆರಚಾಟಗಳು ಜೋರಾಗುತ್ತವೆ. ಜೊತೆಗೆ ಕೆಲವರು ವಿವಾದಾತ್ಮಕ ಹೇಳಿಕೆಗಳನ್ನು ನೀಡು ಶಾಂತಿ ಸುವ್ಯವಸ್ಥೆಗೆ ದಕ್ಕೆ ತರುತ್ತಾರೆ. ಅದೆ ರೀತಿ ಸಚಿವ ಅಶ್ವತ್ಥನಾರಾಯಣ, ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮೊದಲಿನಿಂದಲೂ ಟಿಪ್ಪು ಪರವಾಗಿ ಮಾತನಾಡುತ್ತಾ ಬಂದಿದೆ. ಬಿಜೆಪಿ ಆತ ದೇಶದ್ರೋಹಿ ಎಂದು ವಿರೋಧಿಸುತ್ತಲೇ ಬಂದಿದೆ. ಹೀಗಾಗಿ ಟಿಪ್ಪು ಸುಲ್ತಾನ್ ಮಾದರಿಯಲ್ಲೇ ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳದುಕೊಂಡಿದ್ದಾರೆ.
ದೇವರು, ಧರ್ಮ, ಜಾತಿ ಹೆಸರಿನಲ್ಲಿ ಚುನಾವಣೆ ಮಾಡಬಾರದು ಎಂದು ಹೇಳಿದರೂ, ಪ್ರಜಾಪ್ರಭುತ್ವದ ಹೊತ್ತಿನಲ್ಲಿಯೂ ಕೆಲವರು ದೇವರನ್ನು ಎಳೆದು ತರುತ್ತಿದ್ದಾರೆ. ಅಭಿವೃದ್ಧಿ, ಜನಪರ ಕೆಲಸ, ಯೋಜನೆಗಳ ಬಗ್ಗೆ ಬಿಟ್ಟು ಧರ್ಮ, ದೇವರ ನಡುವೆ ಚುನಾವಣೆ ನಡೆದಿದೆ ಎಂದು ಹೇಳುವ ಮೂಲಕ ಕೋಮು ಸೌಹಾರ್ದತೆ ಹಾಳು ಮಾಡುತ್ತಿರುವುದು ಮಾತ್ರ ದೊಡ್ಡ ದುರಂತ.