ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆಯ ತಂಡದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಚಿವ ಸಿ.ಪಿ ಯೋಗೇಶ್ವರಗೆ ಕೋಲಾರ ಉಸ್ತುವರಿ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದು, ಕೋಲಾರ ಉಸ್ತುವಾರಿ ಖಾಲಿಯಿದ್ದು, ಯೋಗೇಶ್ವರ ನೀಡಲು ಚಿಂತನೆ ನಡೆದಿದೆ ಎಂದಿದ್ದಾರೆ.
ಇನ್ನು ಸಕ್ಕರೆ ಹಾಗೂ ಪೌರಾಡಳಿತ ಸಚಿವ ಎಂಟಿಬಿ ನಾಗರಾಜಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಲಾಗ್ತಿದೆ. ಕಂದಾಯ ಸಚಿವ ಆರ್.ಅಶೋಕ ಅಪೇಕ್ಷೆಯಂತೆ ಎಂಟಿಬಿ ಈ ಜವಾಬ್ದಾರಿ ನೀಡಲಾಗ್ತಿದೆ ಎಂದು ತಿಳಿದು ಬಂದಿದೆ.