ಸಚಿವ ಡಿ.ಸುಧಾಕರ್ ರಾಜೀನಾಮೆ ನೀಡಲಿ: ಬೊಮ್ಮಾಯಿ

160

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭೂ ಕಬಳಿಕೆ, ದೌರ್ಜನ್ಯ ಹಾಗೂ ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಸಚಿವ ಡಿ.ಸುಧಾಕರ್ ರಾಜೀನಾಮೆ ನೀಡಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಕಾನೂನಾತ್ಮಕ ಹೋರಾಟ ಮಾಡಲಿ. ದಲಿತರ ಮೇಲಿನ ದೌರ್ಜನ್ಯದಲ್ಲಿ ಪೊಲೀಸರಿಗೆ ಸಾಮಾನ್ಯ ಜನರೊಂದಿಗೆ ಹೇಗೆ ನಡೆದುಕೊಳ್ಳುತ್ತಾರೋ ಅದೇ ರೀತಿ ಸಚಿವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಬೇಕು. ಪೊಲೀಸರು ಒತ್ತಡಕ್ಕೆ ಮಣಿದರೆ ಹೋರಾಟ ಮಾಡಬೇಕಾಗುತ್ತೆ ಅನ್ನೋ ಎಚ್ಚರಿಕೆ ನೀಡಿದರು.

ಈ ಸರ್ಕಾರ ದಲಿತ ವಿರೋಧಿ ಸರ್ಕಾರವಾಗಿದೆ. ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಿಟ್ಟ 11 ಸಾವಿರ ರೂಪಾಯಿಗಳನ್ನು ಗ್ಯಾರೆಂಟಿಗಳಿಗೆ ಬಳಸುತ್ತಿದೆ. ದಲಿತರು ಇವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದರು. ಇನ್ನು INDIA ಒಕ್ಕೂಟದ ಬಗ್ಗೆ ಮಾತನಾಡಿ, ಒಬ್ಬರಿಗೊಬ್ಬರು ಆಗದವರು ಒಂದಾಗಿದ್ದಾರೆ. ಇವರೆಲ್ಲ ಅಸಹಾಯಕರಾ, ರಾಜಕೀಯದಲ್ಲಿ ಹಲವು ಬದಲಾವಣೆಗಳಾಗಿವೆ ಎನ್ನುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಟೀಕಸಿರುವ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದರು.




Leave a Reply

Your email address will not be published. Required fields are marked *

error: Content is protected !!