ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರಗೆ ಫೋನ್ ಮಾಡಿರುವ ಕಾಂಗ್ರೆಸ್ ನಾಯಕರು ಧೈರ್ಯ ತುಂಬಿದ್ದಾರೆ. ಸಚಿವರ ಕುಟುಂಬದಲ್ಲಿ ಮೂವರಿಗೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ ಫೋನ್ ಮಾಡಿ ಧೈರ್ಯ ತುಂಬಿದ್ದಾರೆ.
ಇವರ ಜೊತೆಗೆ ಮಾಜಿ ಸ್ಪೀಕರ್ ರಮೇಶಕುಮಾರ, ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ಕೆ.ಹೆಚ್ ಮುನಿಯಪ್ಪ, ಹೆಚ್.ಕೆ ಪಾಟೀಲ ಸಹ ಸಚಿವ ಸುಧಾಕರಗೆ ಫೋನ್ ಮಾಡಿ, ಅವರ ಕುಟುಂಬ ಸದಸ್ಯರ ಆರೋಗ್ಯ ವಿಚಾರಿಸಿದ್ದಾರೆ. ತಮಗೆ ಆತ್ಮಸ್ಥೈರ್ಯ ತುಂಬಿದ ನಾಯಕರಿಗೆ ಕೃತಜ್ಞತೆಯನ್ನ ಸಲ್ಲಿಸಿದ್ದಾರೆ.
ಸಚಿವ ಡಾ.ಕೆ.ಸುಧಾಕರ ಅವರ ತಂದೆ, ಪತ್ನಿ ಹಾಗೂ ಮಗಳಿಗೆ ಕರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.