ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಹೋಗಬಾರದಿತ್ತು. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಯಾವ ಪಕ್ಷದಲ್ಲಿದ್ದಾರೋ ಆ ಪಕ್ಷಕ್ಕೆ ಎಳೆದುಕೊಂಡು ಹೋಗಿದ್ದಾರೆ. ಶಾಸಕ ಲಕ್ಷ್ಮಣ್ ಸವದಿ ಕಾಂಗ್ರೆಸ್ ನಲ್ಲೇ ಇರ್ತಾರೆ ಅನ್ನೋ ನಂಬಿಕೆ ಇದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ ಹೇಳಿದ್ದಾರೆ.
ಲಕ್ಷ್ಮಣ್ ಸವದಿ ನನ್ನ ಒಡನಾಟ ಬಹಳ ಹಳೆಯದರು. ಅವರು ಏನು ಹೇಳಿದ್ದಾರೋ ಅದರಂತೆ ನಡೆದುಕೊಳ್ಳುತ್ತಾರೆ. ಹೀಗಾಗಿ ಅವರ ಮೇಲೆ ಅಪನಂಬಿಕೆ, ಅವಿಶ್ವಾಸ ಇಲ್ಲ. ನಮ್ಮ ಪಾರ್ಟಿಯಲ್ಲೇ ಇರ್ತಾರೆ ಎನ್ನು ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.