ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಸೂಚನೆ ಮೇರೆಗೆ ರಾಜೀನಾಮೆ ಸಲ್ಲಿಸಬೇಕು ಎಂದಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ, ಬಜೆಟ್ ಹಿನ್ನೆಲೆಯಲ್ಲಿ ಪಕ್ಷಕ್ಕೆ ಮುಜುಗರ ತಪ್ಪಿಸುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಬೇಕು ಅನ್ನೋ ಮಾತಿಯಿಂದಾಗಿ, ರಾಜೀನಾಮೆ ಸಲ್ಲಿಸಲಾಗಿದೆ. ತನಿಖೆಯಲ್ಲಿ ಆರೋಪ ಮುಕ್ತವೆಂದು ತಿಳಿದ್ರೆ ಮತ್ತೆ ಮಂತ್ರಿ ಮಾಡಬೇಕು ಅನ್ನೋ ಬೇಡಿಕೆಯಿಟ್ಟು ರಾಜೀನಾಮೆ ಪತ್ರ ರವಾನಿಸಲಾಗಿದೆ.