ಕರೋನಾಗೆ ಉತ್ತರ ಪ್ರದೇಶ ಸಚಿವೆ ಬಲಿ

362

ಪ್ರಜಾಸ್ತ್ರ ಸುದ್ದಿ

ಲಖನೌ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ವರುಣ ಅವರು ಕರೋನಾದಿಂದ ಸಾವನ್ನಪ್ಪಿದ್ದಾರೆ. ಯೋಗಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವೆಯಾಗಿದ್ದ ಕಮಲಾರಾಣಿ ಅವರು, ಕೆಲ ದಿನಗಳ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ರು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು.

ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿವೆಯ ನಿಧನದಿಂದಾಗಿ ಸಿಎಂ ಯೋಗಿ ಆದಿತ್ಯನಾಥ ಅವರು, ಇಂದಿನ ಅಯೋಧ್ಯೆ ಭೇಟಿಯನ್ನ ರದ್ದುಗೊಳಿಸಿದ್ದಾರೆ. ಸ್ನಾತಕೋತ್ತರ ಪದವಿಧರೆಯಾಗಿದ್ದ ಕಮಲಾರಾಣಿ ಅವರು, ಮುನ್ಸಿಪಲ್ ರಾಜಕೀಯದಿಂದ ಹಂತ ಹಂತವಾಗಿ ಮೇಲೆ ಬಂದಿದ್ರು.

1996 ಹಾಗೂ 98ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ರು. ಇನ್ನು ಕಳೆದಬಾರಿ ಕಾನ್ಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದ ಇವರು, ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ರು. ಮೇ 3, 1958ರಲ್ಲಿ ಜನಿಸಿದ ಕಮಲಾರಾಣಿ ಇಂದು ನಿಧನಹೊಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!