ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಆರೇಳು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಕಾಂಗ್ರೆಸ್ ನ 25 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾಗುತ್ತೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದರು. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ತಿರುಗೇಟು ನೀಡಿದ್ದಾರೆ.
140 ವರ್ಷಗಳಿಂದ ಪಕ್ಷವನ್ನು ಕಟ್ಟಿಕೊಂಡು ಬಂದಿದ್ದೇವೆ. ನಮಗೂ ರಾಜಕೀಯ ಮಾಡಲು ಬರುತ್ತೆ. ಕರ್ನಾಟಕದಲ್ಲಿ ಅವರದು ಏನೂ ನಡೆಯಲ್ಲ. ಆರೇಳು ತಿಂಗಳಲ್ಲಿ ಬಿಜೆಪಿಯವರೆ ಎಷ್ಟು ಜನ ಉಳಿದುಕೊಳ್ಳುತ್ತಾರೆ ನೋಡಿ ಅಂತಾ ಪ್ರತ್ಯುತ್ತರ ಕೊಟ್ಟಿದ್ದಾರೆ.