ಬ್ರೇಕಿಂಗ್ ನ್ಯೂಸ್
Search

ಕುಮಾರಸ್ವಾಮಿ ಆರೋಪಗಳ ನಿಸ್ಸೀಮರು: ಸಚಿವ ಜಾರ್ಜ್

187

ಪ್ರಜಾಸ್ತ್ರ ಸುದ್ದಿ

ರಾಮನಗರ: ರಾಜ್ಯ ಸರ್ಕಾರದ ವಿರುದ್ಧ ಒಂದಲ್ಲ ಒಂದು ಗಂಭೀರ ಆರೋಪಗಳನ್ನು ಮಾಡುತ್ತಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಇಂದು ಬಿಡದಿಯಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್, ಕುಮಾರಸ್ವಾಮಿಯವರು ಆರೋಪಗಳನ್ನು ಮಾಡುವುದರಲ್ಲಿ ನಿಸ್ಸೀಮರು ಎಂದರು.

ಪೆನ್ ಡ್ರೈವ್ ನಲ್ಲಿ ಏನಿದೆ ಎಂದು ಇದುವರೆಗೂ ತೋರಿಸಿಲ್ಲ. ಆರೋಪಗಳನ್ನು ಅವರು ಎಂದಾರೂ ಸಾಬೀತು ಮಾಡಿದ್ದಾರಾ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯನವರನ್ನು ಲಜ್ಜೆಗೆಟ್ಟ ಸಿಎಂ ಎಂದಿರುವುದು ಅವರ ಸಂಸ್ಕೃತಿ ತೋರಿಸುತ್ತೆ ಅಂತಾ ಪ್ರತ್ಯುತ್ತರ ನೀಡಿದರು.

ಇನ್ನು ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧದ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸಹ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದರು.




Leave a Reply

Your email address will not be published. Required fields are marked *

error: Content is protected !!