ಇನ್ನೂ ಮೂವರಿಗೆ ಡಿಸಿಎಂ ಮಾಡಲು ಸಚಿವ ರಾಜಣ್ಣ ಆಗ್ರಹ

183

ಪ್ರಜಾಸ್ತ್ರ ಸುದ್ದಿ

ತುಮಕೂರು: ರಾಜ್ಯದಲ್ಲಿ ಇನ್ನು 3 ಡಿಸಿಎಂ ಸ್ಥಾನ ನಿರ್ಮಿಸಲು ಸಚಿವ ಕೆ.ಎನ್ ರಾಜಣ್ಣ ಆಗ್ರಹಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಮೂರು ಸಮುದಾಯದಿಂದ ಒಬ್ಬರನ್ನು ಡಿಸಿಎಂ ಮಾಡಿ ಅನ್ನೋ ಆಗ್ರಹ ಮುಂದಿಟ್ಟಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತ ಹಾಗೂ ವೀರಶೈವ ಸಮುದಾಯದ ಓರ್ವ ಮುಖಂಡರನ್ನು ಡಿಸಿಎಂ ಮಾಡಬೇಕು. ಇದು ಲೋಕಸಭಾ ಚುನಾವಣೆ ದೃಷ್ಟಿಯಿಂದ ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ ಅಂತಾ ಹೇಳಿದ್ದಾರೆ.

ನನ್ನ ಹೇಳಿಕೆಯಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅಸಮಾಧಾನಗೊಳ್ಳುವುದಿಲ್ಲ. ಅವರಿಗೆ ಪಕ್ಷ ಸಂಘಟನೆಯ ಚಾಣಕ್ಷತನವಿದೆ. ಹೀಗೆ ಮಾಡುವುದರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗಬಹುದು ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ಪಕ್ಷದ ಆಂತರಿಕ ಮಟ್ಟದಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತೆ ಕಾದು ನೋಡಬೇಕಿದೆ.




Leave a Reply

Your email address will not be published. Required fields are marked *

error: Content is protected !!