ಧಾರವಾಡ: ಮಾಜಿ ಸಚಿವ ಡಿಕೆ ಶಿವಕುಮಾರವರನ್ನ ಇಡಿ ಅಧಿಕಾರಿಗಳು ಬಂಧಿಸಿರುವ ವಿಚಾರದಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಒಂದೇ ರಾಷ್ಟ್ರ ಒಂದೇ ಸಂವಿಧಾನ ಅಭಿಯಾನ ಅಡಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಈ ರೀತಿ ಹೇಳಿದ್ದಾರೆ. ಡಿಕೆಶಿ ವಿಚಾರದಲ್ಲಿ ಇಡಿ ತನ್ನ ಕಾರ್ಯನಿರ್ವಹಿಸ್ತಿದೆ. ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅನರ್ಹ ಶಾಸಕರ ಕ್ಷೇತ್ರಗಳಲ್ಲಿ 6 ತಿಂಗಳಲ್ಲಿ ಚುನಾವಣೆ ನಡೆಯುತ್ತೆ ಅಂತಾ ಹೇಳಿದ್ರು.
ಈ ವೇಳೆ ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಮೋಹನ ರಾಮದುರ್ಗ, ಶಿವು ಹಿರೇಮಠ ಹಾಜರಿದ್ರು.