ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿದೆ. ಪೀಸ್ ಸಂಘಟನೆಯ ಕಾರ್ಯಕರ್ತ ರಿಯಾಜ್ ಎಂಬುವರು ದೊಡ್ಡಪೇಟೆ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಆದರೆ, ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ.
ಪೊಲೀಸರು ಕ್ರಮ ತೆಗೆದುಕೊಳ್ಳದೆ ಹೋದ ಕಾರಣ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಲ್ಲದೇ ಜಿಲ್ಲೆಯಲ್ಲಿ ಗಲಾಟೆ ನಡೆಯಲು ಕಾರಣರಾಗಿದ್ದಾರೆ ಎಂದು ಈಶ್ವರಪ್ಪ, ಪಾಲಿಕೆ ಸದಸ್ಯ ಚನ್ನಬಸಪ್ಪ ವಿರುದ್ಧ ದೂರು ನೀಡಿದ್ದಾರೆ.