ಸಿಂದಗಿ: ಹಿರಿಯ ನಾಟಕಕಾರ, ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಸಚಿವ ಎಂ.ಸಿ ಮನಗೂಳಿ ಅವರು ಸಂತಾಪ ಸೂಚಿಸಿದ್ದಾರೆ.
ಈ ನಾಡು ಕಂಡ ಅತ್ಯಂತ ಖ್ಯಾತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ಅವರು ವಿದೇಶಕ್ಕೂ ಕನ್ನಡ ಸಾಹಿತ್ಯವನ್ನು ಪರಿಚಯಿಸಿದವರು. ಕನ್ನಡ ನಾಡು, ನುಡಿ, ಭಾಷೆಯ ವಿಷಯದಲ್ಲಿ ಅನೇಕ ಸಾಹಿತ್ಯಿಕ ವಿಚಾರಗಳನ್ನು ಮಂಡಿಸಿದವರು. ತಮ್ಮ ನಾಟಕಗಳ ಮೂಲಕ ಸಮಾಜದ ಓರೇ ಕೊರೆಗಳನ್ನು ತಿದ್ದಿದಂತವರು. ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದ ಕಾರ್ನಾಡ್ ಅವರನ್ನು ಕಳೆದುಕೊಂಡ ಕನ್ನಡ ನಾಡು ಬಡವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿತನ್ನು ನೀಡಲಿ ಎಂದು ತೋಟಗಾರಿಕೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ ಮನಗೂಳಿ ಅವರು ಸಂತಾಪ ಸೂಚಿಸಿದ್ದಾರೆ.