ಶಾಮನೂರು ಹೇಳಿಕೆಗೆ ಪರಮೇಶ್ವರ್ ಪ್ರತ್ಯುತ್ತರ

135

ಪ್ರಜಾಸ್ತ್ರ ಸುದ್ದಿ

ತುಮಕೂರು: ವೀರಶೈವ ಲಿಂಗಾಯತ ಅಧಿಕಾರಿಗಳ ಸ್ಥಿತಿ ನಾಯಿಪಾಡಾಗಿದೆ. ಎಸ್.ನಿಜಲಿಂಗಪ್ಪರಿಂದ ಹಿಡಿದು ಹಿಡಿದು ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ತನಕ ಆಯಾ ಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದರು. ಈಗ ಸೂಕ್ತ ಸ್ಥಾನಮಾನ ಇಲ್ಲ ಎಂದು ಹೇಳಿದ ಕಾಂಗ್ರೆಸ್ ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸಚಿವ ಜಿ.ಪರಮೇಶ್ವರ್ ಉತ್ತರ ನೀಡಿದ್ದಾರೆ.

ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ಹಾಕುವುದಿಲ್ಲ. ನೇಮಕಾತಿ ಸಂದರ್ಭದಲ್ಲಿ ಜಾತಿ ಆಧಾರದ ಮೇಲೆ ನಡೆಯುತ್ತೆ. ಹುದ್ದೆ ಕೊಡುವ ಸಂದರ್ಭದಲ್ಲಿ ಜಾತಿ ನೋಡುವುದಿಲ್ಲ. ಅವರ ಸಾಮರ್ಥ್ಯ, ಪ್ರಾಮಾಣಿಕತೆ ನೋಡಲಾಗುತ್ತೆ ಎಂದು ಹೇಳುವ ಮೂಲಕ ಸ್ವಪಕ್ಷೀಯ ಹಿರಿಯ ನಾಯಕರ ಮಾತಿಗೆ ಪ್ರತ್ಯುತ್ತರ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!