ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೃಷಿ ಮಸೂದೆ ವಿರುದ್ಧ ಹೋರಾಡ್ತಿರುವ ರೈತರ ಪರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಇದರ ಬಗ್ಗೆ ವ್ಯಂಗ್ಯವಾಡಿದ್ದ ಸಚಿವ ಆರ್.ಅಶೋಕ, ಕಾಂಗ್ರೆಸ್ ನವರಿಗೆ ಕೆಲಸವಿಲ್ಲ. ನಿರುದ್ಯೋಗಿಗಳಾಗಿ ಹೀಗೆ ಮಾಡ್ತಿದ್ದಾರೆ ಎಂದಿದ್ರು, ಸಚಿವ ಅಶೋಕ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ತಿರುಗೇಟು ನೀಡಿದ್ದಾರೆ.
ನಾವು ರೈತರ ಪರವಾಗಿ ಧ್ವನಿ ಎತ್ತಿದ್ದೇವೆ. ಕೆಲವು ಸಚಿವರು ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮಾಡಿದ್ದೇವೆ. ನಾವು ನಿರುದ್ಯೋಗಿಗಳು ಎಂದಿದ್ದಾರೆ. ಬಿಜೆಪಿ ಆಡಳತದಲ್ಲಿ ಇಡೀ ದೇಶವೇ ನಿರುದ್ಯೋಗದಲ್ಲಿದೆ. ಅದರಲ್ಲಿ ವಿಪಕ್ಷವಾದ ನಾವು ನಿರುದ್ಯೋಗಿಗಳು ಎಂದು ತಿರುಗೇಟು ನೀಡಿದ್ದಾರೆ.
ಸಾಮ್ರಾಟ್ ಅಶೋಕ ಪ್ರಕಾರ ನಾವು ನಿರುದ್ಯೋಗಿಗಳು. ಅದು ನಿಜವೇ. ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗದಲ್ಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆ ಎಂದು ಕಿಡಿ ಕಾರಿದ್ರು.