ರಾಜೀನಾಮೆ ವಿಚಾರ: ರಮೇಶ ಜಾರಕಿಹೊಳಿ ಯೂಟರ್ನ್

383

ದಾವಣಗೆರೆ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವ ಹೇಳಿಕೆಯಿಂದ ಯೂಟರ್ನ್ ತೆಗೆದುಕೊಂಡಿದ್ದಾರೆ. ಶಾಸಕ ಮಹೇಶ ಕುಮಟಳ್ಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಹಾಗೇನಾದ್ರೂ ಆದ್ರೆ, ಸಚಿವ ಸ್ಥಾನ, ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ ಅಂತಾ ಹೇಳಿದ್ರು. ಮಹೇಶ ಕುಮಟಳ್ಳಿ ಅನ್ಯಾಯವಾಗಿದೆ ಅಂತಾ ಒಂದು ಮಾತು ಹೇಳಿದ್ರೆ ಸಾಕು ರಾಜೀನಾಮೆ ಕೊಡ್ತೀನಿ ಅಂದಿದ್ರು. ಇದೀಗ ಇದ್ರಿಂದ ಉಲ್ಟಾ ಹೊಡೆದಿದ್ದಾರೆ.

ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿಲ್ಲ. ವಿಡಿಯೋ ಇದ್ರೆ ತೋರಿಸಿ. ನನ್ನ ಹೇಳಿಕೆಯನ್ನ ತಿರುಚಲಾಗಿದೆ. ಈ ಬಗ್ಗೆ ನಾನು ಯಾರಿಗೂ ಸ್ಪಷ್ಟನೆ ನೀಡಬೇಕಾಗಿಲ್ಲವೆಂದು ಹೇಳಿದ್ದಾರೆ. ನೀರಾವರಿ ವಿಚಾರದಲ್ಲಿ ಎಲ್ಲರ ಸಲಹೆ ಪಡೆಯುತ್ತಿದ್ದೇನೆ. ಮಹದಾಯಿ ವಿಚಾರ ಸಂಬಂಧ ಶಿವಮೊಗ್ಗಕ್ಕೆ ಹೊರಟಿದ್ದೇನೆ. ಫೆಬ್ರವರಿ 26ರಂದು ಕೇಂದ್ರ ಸಚಿವರನ್ನ ಭೇಟಿ ಮಾಡಿ ಈ ಬಗ್ಗೆ ಮಾತ್ನಾಡ್ತೀನಿ ಅಂತಾ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!