ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಧ್ಯ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಯಲ್ಲಿರುವುದು ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವುದು. ಕೈ ನಾಯಕರೇ ಈ ಬಗ್ಗೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ, ನನ್ನ ಸಂಪರ್ಕದಲ್ಲಿ ಬಿಜೆಪಿ, ಜೆಡಿಎಸ್ ನ 20 ಮಂದಿ ಇದ್ದಾರೆ ಎಂದಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ. ಬಿಜೆಪಿಯವರು ಸುಮ್ಮನೆ ಇರುವುದಿಲ್ಲ. ಹೀಗಾಗಿ ನಮ್ಮವರನ್ನು ಅವರು ಜಗ್ಗಬಾರದೆಂದು ಅವರನ್ನೇ ನಾವು ಜಗ್ಗಿದ್ದೇವೆ ಎನ್ನುವ ಮೂಲಕ ಆಪರೇಷನ್ ಹಸ್ತ ಫಿಕ್ಸ್ ಎಂದಿದ್ದಾರೆ.