‘ಸುಳ್ಳು ಹೇಳುವುದರಲ್ಲಿ ಕುಮಾರಸ್ವಾಮಿ ಮೀರಿಸುವವರಿಲ್ಲ’

109

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಅಧಿಕಾರಿಗಳ ವರ್ಗಾವಣೆ, ನೇಮಕಾತಿ ವಿಚಾರದಲ್ಲಿ ಹಣ ಪಡೆದಿಲ್ಲ ಎಂದು ಕಾಂಗ್ರೆಸ್ ಸಚಿವರು ಧರ್ಮಸ್ಥಳಕ್ಕೆ ಅಥವ ಚಾಮುಂಡಿ ಬೆಟ್ಟಕ್ಕೆ ಬಂದು ಪ್ರಮಾಣ ಮಾಡಲಿ. ನಾನು ಬರುತ್ತೇನೆ ಎಂದು ಹೇಳಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಶರಣಬಸಪ್ಪ ದರ್ಶನಾಪುರ್ ವಾಗ್ದಾಳಿ ನಡೆಸಿದ್ದು, ನಾನು ಬಹಳ ಸ್ವಚ್ಛ ಇದ್ದೇನೆ ಎಂದು ಕುಮಾರಸ್ವಾಮಿ ಪ್ರಮಾಣ ಮಾಡಲಿ ಎಂದರು.

ಕುಮಾರಸ್ವಾಮಿ ಹತಾಶರಾಗಿದ್ದಾರೆ. ಮೈತ್ರಿ ಸರ್ಕಾರ ಬೀಳಿಸಿದ್ದು ಎಂದು ಮೊದಲು ಸಿದ್ಧರಾಮಯ್ಯ ವಿರುದ್ಧ ಆರೋಪಿಸಿದರು. ಈಗ ಡಿ.ಕೆ ಶಿವಕುಮಾರ್ ಅಂತಿದ್ದಾರೆ. ಅವರ ಬಗ್ಗೆ ಮಾತನಾಡಲು ಏನೂ ಇಲ್ಲ. ಯಾಕಂದರೆ ಸುಳ್ಳು ಹೇಳುವುದರಲ್ಲಿ ಅವರನ್ನು ಮೀರಿಸುವವರಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇಂದು ಮುಂಜಾನೆ ದಿಢೀರ್ ಮಾಧ್ಯಮಗೋಷ್ಠಿ ನಡೆಸಿದ ಕುಮಾರಸ್ವಾಮಿ, ರಾಮನಗರ ಜಿಲ್ಲೆ ವಿಚಾರ ಸಂಬಂಧ ಡಿ.ಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಂತರ ಅಧಿಕಾರಿಗಳ ವರ್ಗಾವಣೆ, ನೇಮಕಾತಿ ವಿಚಾರದಲ್ಲಿ ನಾನಾಗಲಿ, ನಮ್ಮ ಮನೆಯವರಾಗಲಿ ಇದುವರೆಗೂ ಹಣ ಪಡೆದಿಲ್ಲ. ಬೇಕಿದ್ದರೆ 30 ಸಚಿವರು ಧರ್ಮಸ್ಥಳಕ್ಕೋ, ಚಾಮುಂಡಿ ಬೆಟ್ಟಕ್ಕೂ ಬರಲಿ ಎಂದು ಸವಾಲು ಹಾಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!