ಪ್ರಜಾಸ್ತ್ರ ಸುದ್ದಿ
ಬಳ್ಳಾರಿ: ಸಾರಿಗೆ ಸಚಿವ ಬಿ.ಶ್ರೀರಾಮುಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಅನ್ನೋದನ್ನು ಘೋಷಿಸಿದ್ದಾರೆ. ಒಂದು ಕಡೆ ಮಾಜಿ ಸಿಎಂ ಯಡಿಯೂರಪ್ಪ ಅಭ್ಯರ್ಥಿಗಳ ಘೋಷಣೆ ಅಧಿಕಾರ ನಮಗೆ ಇಲ್ಲ ಎನ್ನುತ್ತಿದ್ದಾರೆ. ಇನ್ನೋದಮು ಕಡೆ 2023ರ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶ್ರೀರಾಮುಲು ಘೋಷಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಶ್ರೀರಾಮುಲು, ಈ ಮೊದಲು ಸಂಡೂರಿನಿಂದ ಸ್ಪರ್ಧಿಸುತ್ತೇನೆ ಎಂದಿದ್ದರು. ಈಗ ಬಳ್ಳಾರಿ ಗ್ರಾಮೀಣ ಎಂದು ಹೇಳಿದ್ದಾರೆ. ಇದಕ್ಕೆ ಕಾರಣ ಆಸ್ಸಾಂ ಸಿಎಂ ಎನ್ನಲಾಗುತ್ತಿದೆ. ಅದೇನು ಅನ್ನೋದು ಸ್ಪಷ್ಟತೆ ಇಲ್ಲ.
ಬಳ್ಳಾರಿ ನಗರದಿಂದ ಶ್ರೀರಾಮುಲು ಸ್ನೇಹಿತ ಗಾಲಿ ಜನಾರ್ಧನ್ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ಅವರ ಸಹೋದರ ಸೋಮಶೇಖರ್ ರೆಡ್ಡಿ ಶಾಸಕರಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ನೋವು ಅನುಭವಿಸಿರುವ ಜನಾರ್ಧನ್ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದು, ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಾರೆ. ಒಟ್ಟಿನಲ್ಲಿ ಗಣಿಧೂಳಿನ ನಾಡಿನಲ್ಲಿ ಯಾವ ಪಕ್ಷದಿಂದ ಯಾರು ಅನ್ನೋ ಕುತೂಹಲವಿದೆ.