ಪ್ರಜಾಸ್ತ್ರ ಸುದ್ದಿ
ಬೆಂಗಳೂರು: 2024ರ ವೇಳೆಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತೆ ಅನ್ನೋ ಹೇಳಿಕೆ ನೀಡಿರುವ ಸಚಿವ ಉಮೇಶ್ ಕತ್ತಿ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ಮಟ್ಟದಲ್ಲಿಯೇ ರಾಜ್ಯ ಇಬ್ಬಾಗ ಮಾಡಬೇಕು ಅನ್ನೋ ಚರ್ಚೆಯಾಗುತ್ತಿದೆ ಅನ್ನೋದು ಕತ್ತಿ ಬಹಿರಂಗ ಪಡೆಸಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.