ಬೆಂಗಳೂರು: ಮಿಂಟೋ ಆಸ್ಪತ್ರೆಯ ವೈದ್ಯರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನಡುವಿನ ತಿಕ್ಕಾಟ ಮುಂದುವರೆದಿದೆ. ಹೀಗಾಗಿ ವೈದ್ಯರ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಇದ್ರಿಂದಾಗಿ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ನವೆಂಬರ್ 1ರಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿದ್ದಾರಂತೆ. ಅಲ್ದೇ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆಂದು ಹೇಳಿ ಇಲ್ಲಿನ ಡಾಕ್ಟರ್ಸ್ ಪ್ರೊಟೆಸ್ಟ್ ನಡೆಸಿದ್ದಾರೆ. ಇದಕ್ಕೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ನೀಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದ್ರೆ ನವೆಂಬರ್ 8ರಿಂದ ಒಪಿಡಿ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.